‘ಪರೀಕ್ಷೆ ಮುಗಿದು 5 ತಿಂಗಳಾದರೂ ನಮಗೆ ಅಂಕಪಟ್ಟಿಗಳನ್ನು ವಿತರಿಸಿಲ್ಲ. ಈ ಬಗ್ಗೆ ವಿಚಾರಿಸಿದರೆ, ವಿಶ್ವವಿದ್ಯಾಲಯದಿಂದ ಕಾಲೇಜಿಗೆ ಬರುವ ಮಾರ್ಗಮಧ್ಯದಲ್ಲಿ ನಾಪತ್ತೆಯಾಗಿವೆ ಎಂದು ಹೇಳುತ್ತಿದ್ದಾರೆ. ಇದರಿಂದಾಗಿ ನಮಗೆ ವಿದ್ಯಾರ್ಥಿವೇತನ ಮಂಜೂರಾಗುತ್ತಿಲ್ಲ. ಕೆಲಸಕ್ಕೆ ಅರ್ಜಿಸಲ್ಲಿಸಲೂ ಸಾಧ್ಯವಾಗುತ್ತಿಲ್ಲ’ ಎಂದು ವಿದ್ಯಾರ್ಥಿ ಶರತ್ ‘ಪ್ರಜಾವಾಣಿ’ಯೊಂದಿಗೆ ಅಳಲು ತೋಡಿಕೊಂಡರು.