ಬೆಳಗಾವಿ: ಪತ್ರಕರ್ತೆಯರ ಬಗ್ಗೆ ತಮಿಳುನಾಡು ಶಾಸಕ ಎಸ್.ವಿ. ಶೇಖರ್ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದನ್ನು ಖಂಡಿಸಿ ಪತ್ರಕರ್ತರು ಕಪ್ಪುಪಟ್ಟಿ ಕಟ್ಟಿಕೊಂಡು ಧರಣಿ ನಡೆಸಿ, ಜಿಲ್ಲಾಧಿಕಾರಿಗೆ ಭಾನುವಾರ ಮನವಿ ಸಲ್ಲಿಸಿದರು.
‘ಪತ್ರಕರ್ತರು ಮತ್ತು ಮಾಧ್ಯಮ ಸಂಸ್ಥೆಗಳ ವಿರುದ್ಧ ಕೀಳುಮಟ್ಟದ ಭಾಷೆ ಬಳಸಿರುವ ಅವರ ಶಾಸಕತ್ವ ರದ್ದುಗೊಳಿಸಬೇಕು. ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಳ್ಳಬೇಕು’ ಎಂದು ಒತ್ತಾಯಿಸಿದರು.
‘ಪತ್ರಕರ್ತರ ನಡುವೆ ಅಸಂಬದ್ಧ ಸಂಬಂಧಗಳನ್ನು ಕಲ್ಪಿಸುವ ಕೀಳುಮಟ್ಟದ ಹೇಳಿಕೆ ಅಸಹ್ಯಕರವಾಗಿದೆ. ಅವರು ದೇಶದ ಪತ್ರಕರ್ತರ ಕ್ಷಮೆ ಯಾಚಿಸಬೇಕು’ ಎಂದು ಆಗ್ರಹಿಸಿದರು.