ನಗರದ ಬಸವೇಶ್ವರ ವೃತ್ತದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಮೆರವಣಿಗೆ ಪರಸ್ಪರ ಎದುರುಗೊಂಡಿದ್ದು, ಈ ವೇಳೆ ಬೆಂಬಲಿಗರು ಪೈಪೋಟಿಗಿಳಿದು ಪ್ರಧಾನಿ ನರೇಂದ್ರ ಮೋದಿ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪರ ಘೋಷಣೆ ಕೂಗಿದರು. ಆಗ ನೂಕಾಟ, ತಳ್ಳಾಟ, ಪರಸ್ಪರ ಆರೋಪ- ಪ್ರತ್ಯಾರೋಪಕ್ಕೆ ದಾರಿಯಾಗಿ ಪರಿಸ್ಥಿತಿ ವಿಕೋಪಕ್ಕೆ ತಿರುಗಿತು.