ಕಾರವಾರ: ‘ತಮ್ಮ ಪೂರ್ವಜರಿಗೆ ಸದ್ಗತಿ ದೊರಕಿಸಿಕೊಡುವುದಕ್ಕಾಗಿ ದೇವಗಂಗೆಯನ್ನೇ ಭೂಲೋಕಕ್ಕೆ ತರಲು ಮಹರ್ಷಿ ಭಗೀರಥ ಮಾಡಿದ ನಿರಂತರ ಪ್ರಯತ್ನ ಎಲ್ಲರಿಗೂ ಮಾದರಿ’ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಭಾನುವಾರ ಆಯೋಜಿಸಿದ್ದ ಭಗೀರಥ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
‘ಕಪಿಲ ಮಹರ್ಷಿ ಕೋಪಾಗ್ನಿಗೆ ತುತ್ತಾಗಿ ಬೂದಿಯಾದ ಪೂರ್ವಜರಿಗೆ ಸದ್ಗತಿ ದೊರಕಿಸಿಕೊಡಲು ಅವರು ನಡೆಸಿದ ನಿರಂತರ ಪ್ರಯತ್ನ ಇಂದಿನ ಪೀಳಿಗೆಗೆ ಮಾದರಿಯಾಗಿದೆ. ಕೈಗೊಂಡ ಕೆಲಸವನ್ನು ಮಧ್ಯದಲ್ಲೇ ಕೈಬಿಡದೆ, ಭಗೀರಥನಂತೆ ಗುರಿ ಸಾಧಿಸಬೇಕು’ ಎಂದರು.