ಚುನಾವಣಾಧಿಕಾರಿ ಸುರೇಶ್ ಮಾತನಾಡಿ, ಪಟ್ಟಿಯಲ್ಲಿರುವ ಎಲ್ಲರೂ ಚುನಾವಣೆ ಪ್ರಕ್ರಿಯೆಯಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳಬೇಕು. ಯಾವುದೇ ಸಾಬೂಬು ಹೇಳದೆ ತಪ್ಪಿಸಿಕೊಂಡರೆ ಕ್ರಮ ಕೈಗೊಳ್ಳಲಾಗುವುದು. ಎಲ್ಲರೂ ಸಾಮೂಹಿಕ ಜವಾಬ್ದಾರಿ ಹೊಂದಬೇಕು. ಮೊದಲು ಚುನಾವಣೆಯಲ್ಲಿ ಭಾಗವಹಿಸುವವರು ಆತಂಕ ಪಡದೆ, ಮಾರ್ಗಸೂಚಿ ಪುಸ್ತಕದ ಪ್ರತಿ ಪುಟವನ್ನು ಓದಬೇಕು. ಜತೆಗೆ ಸಿಬ್ಬಂದಿಗೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದರು.