ಜೆಡಿಎಸ್ನಿಂದ ಸ್ಪರ್ಧಿಸಲು ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಶಂಕರೇಗೌಡ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಜೆಡಿಎಸ್ನಿಂದ ಎಂ.ಶ್ರೀನಿವಾಸ್, ಬಿಜೆಪಿಯಿಂದ ಬಿ.ಬಸವೇಗೌಡ ಹಾಗೂ ಕಾಂಗ್ರೆಸ್ನಿಂದ ಅಂಬರೀಷ್ ಅವರಿಗೆ ಟಿಕೆಟ್ ನೀಡಲಾಗಿದೆ. ಆದರೆ, ಮಂಡ್ಯದಿಂದ ಸ್ಪರ್ಧಿಸಲು ಅಂಬರೀಷ್ ಇನ್ನೂ ನಿರ್ಧಾರ ಪ್ರಕಟಿಸಿಲ್ಲ.