‘ರಾಜ್ಯದಲ್ಲಿ ಕೆಲವೊಂದು ಎಟಿಎಂಗಳಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿತ್ತು. ಜತೆಗೆ ಎಟಿಎಂಗಳಿಗೆ ಹಣ ತುಂಬುವ ಅನೇಕ ಖಾಸಗಿ ಏಜೆನ್ಸಿಗಳು ತಮ್ಮ ಕೆಲಸದಲ್ಲಿ ವಿಫಲವಾಗಿದ್ದವು. ಆ ಬಗ್ಗೆ ಪರಿಶೀಲನೆ ಮಾಡಲಾಗುತ್ತಿದ್ದು, ಕ್ರಮಕೈಗೊಳ್ಳುತ್ತೇವೆ. ಶೀಘ್ರದಲ್ಲಿಯೇ ಎಲ್ಲ ಸರಿ ಹೋಗಲಿದೆ. ಕರ್ನಾಟಕದಲ್ಲಿ ಈಗಾಗಲೇ ಕಾಂಗ್ರೆಸ್ ನೆಲೆ ಕಳೆದುಕೊಳ್ಳುತ್ತಿದ್ದು, ಬಿಜೆಪಿ ನೆಲೆ ಕಂಡುಕೊಳ್ಳುತ್ತಿದೆ. ಈ ವಿಧಾನಸಭೆ ಚುನಾವಣೆಯಲ್ಲಿ ನಮಗೆ ಉತ್ತಮ ಫಲಿತಾಂಶ ದೊರೆಯಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.