ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಟಿಕೆಟ್ ವಂಚಿತರಾದ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳು ಒಕ್ಕೂಟ ರಚಿಸಿಕೊಂಡು ತಮ್ಮಲ್ಲೇ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲು ನಿರ್ಧರಿಸಿರುವುದಾಗಿ ವರದಿಯಾಗಿದೆ. ನಿಜಕ್ಕೂ ಇದೊಂದು ಉತ್ತಮ ಬೆಳವಣಿಗೆ. ಹಣವಂತರಿಗೆ ಮಣೆ ಹಾಕುವ, ಚಿತ್ರನಟರ ಕಾಲಿಗೆ ಬೀಳುವ ಪ್ರಮುಖ ರಾಷ್ಟ್ರೀಯ ಪಕ್ಷಗಳ ಹಿರಿಯ ರಾಜಕಾರಣಿಗಳಿಗೆ ಇದರಿಂದ ಪಾಠ ಕಲಿಸಿದಂತಾಗುತ್ತದೆ.