ಕಾಂಗ್ರೆಸ್ ಪಕ್ಷದಿಂದ ವಿಧಾನಸಭೆ ಮುಖ್ಯ ಸಚೇತಕ ಅಶೋಕ ಮಹಾದೇವಪ್ಪ ಪಟ್ಟಣ, ಬಿಜೆಪಿಯಿಂದ ಮಾಜಿ ಶಾಸಕ ಮಹಾದೇವಪ್ಪ ಶಿವಲಿಂಗಪ್ಪ ಯಾದವಾಡ ಅವರು ಚುನಾವಣಾಧಿಕಾರಿ ಕೆ. ಮಹೇಶ್ವರಪ್ಪ ಅವರಿಗೆ ಉಮೇದುವಾರಿಕೆ ಸಲ್ಲಿಸಿದರು. ಜೆಡಿಎಸ್ ಪಕ್ಷದ ರಾಜ್ಯ ಉಪಾಧ್ಯಕ್ಷ ಪಿ.ಎಫ್. ಪಾಟೀಲ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ‘ಸಮಾಜದ ಮುಖಂಡರು ತಮ್ಮ ಸಮಾಜಕ್ಕೆಅವಕಾಶ ಲಭ್ಯವಾಗಿಲ್ಲ’ ಎಂದು ಅವರು ಸ್ವತಂತ್ರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದಾರೆ.