ಕೇಂದ್ರ ಸಚಿವ ಅನಂತಕುಮಾರ್ ವಿರುದ್ಧ ಕಾರ್ಯಕರ್ತರು ಧಿಕ್ಕಾರ ಕೂಗಿದರು. ವಿಜಯೇಂದ್ರಗೆ ಅನ್ಯಾಯ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅವರನ್ನು ಹೊರತುಪಡಿಸಿ ಯಾರನ್ನೇ ಕಣಕ್ಕಿಳಿಸಿದರೂ ಸೋಲಿಸುತ್ತೇವೆ. ಈ ಅನ್ಯಾಯದಿಂದಾಗಿ ವರುಣಾದಲ್ಲಿ ಜೆಡಿಎಸ್ ಪಕ್ಷಕ್ಕೆ ಬೆಂಬಲ ನೀಡುತ್ತೇವೆ. ಮೈಸೂರು ಭಾಗದಲ್ಲಿ ಬಿಜೆಪಿ ಸತ್ತಿದ್ದು, ಶ್ರದ್ಧಾಂಜಲಿ ಸಲ್ಲಿಸುತ್ತೇವೆ ಎಂದು ಘೋಷಣೆ ಕೂಗಿದರು. ಇವರು ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡುವುದೂ ಅನುಮಾನ ಎಂದು ಹರಿಹಾಯ್ದರು.