ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು. ‘ಜಿಲ್ಲೆಯ ನದಿ, ಜಲಪಾತ ಒಳಗೊಂ ಡಂತೆ ಯಾವುದೇ ನೀರಿನ ಮೂಲ ಗಳಿಂದ ಸಖರಾಯಪಟ್ಟಣ, ದೇವನೂರು ಭಾಗಕ್ಕೆ ನೀರಾವರಿ ಕಲ್ಪಿಸಲು ಶ್ರಮಿಸುತ್ತೇವೆ. ತೋಟ ಕಾರ್ಮಿಕರ ಸಮಸ್ಯೆ ಬಗೆಹರಿಸು ತ್ತೇವೆ. ಜಿಲ್ಲಾಸ್ಪತ್ರೆಯನ್ನು ಮೇಲ್ದರ್ಜೆ ಗೇರಿಸುತ್ತೇವೆ. ಅಭಿವೃದ್ಧಿ ಮಾಡಲು ಒಂದು ಅವಕಾಶ ನೀಡಿ' ಎಂದು ಮನವಿ ಮಾಡಿದರು.