ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿರುವ ಸಿಎಂ ಸಿದ್ದರಾಮಯ್ಯ ಅವರ ಕುರಿತಾದ ಪ್ರಶ್ನೆಗೆ ಪ್ರತಿಕ್ರಿಯಿಸಿ,‘ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧಿಸುವುದಾಗಿ ಅವರು ಹೇಳುತ್ತಿದ್ದರು. ತನ್ನ ನಿಲುವಿಗೆ ತಾನು ಬದ್ಧರಾಗಿರಬೇಕಿತ್ತು. ರಾಜಕೀಯದಲ್ಲಿ ಸೋಲು–ಗೆಲುವು ಸಾಮಾನ್ಯ. ನಾಯಕನಾದವನು ಹೋರಾಡಲೇ ಬೇಕು’ ಎಂದಿದ್ದಾರೆ.