ಗ್ರಾಮೀಣ ಭಾಗದಲ್ಲಿ ಪ್ರಚಾರಕ್ಕೆ ಹೆಚ್ಚಿನ ಒತ್ತು ನೀಡಬೇಕೆನ್ನುವ ಅಭ್ಯರ್ಥಿಗಳಿಗೆ, ಉರಿಬಿಸಿಲಿನಲ್ಲಿ ಮತದಾರರು ಸಿಗುತ್ತಾರೊ ಇಲ್ಲವೋ ಎನ್ನುವ ಭಯ ಕೂಡ ಆವರಿಸಿದೆ. ತಂಪನೆಯ ಹೊತ್ತಿನಲ್ಲಿ ಪ್ರಚಾರಕ್ಕೆ ಹೋಗಬೇಕೆಂದರೂ ಚುನಾವಣೆಗೆ ಬೆರಳೆಣಿಕೆ ದಿನಗಳು ಮಾತ್ರ ಉಳಿದಿರುವುದು ಆತಂಕವನ್ನುಂಟು ಮಾಡುತ್ತಿದೆ. ಆದರೂ ಕೆಲವು ಅಭ್ಯರ್ಥಿಗಳು ಕಾರ್ಯಕರ್ತರು, ಮತದಾರರನ್ನು ಭೇಟಿಯಾಗುತ್ತ ಮತಯಾಚನೆ ಮಾಡುತ್ತಿದ್ದಾರೆ.