‘ಕಳೆದ ಐದು ವರ್ಷ ನಾನು ಮಾಡಿದ ಸೇವೆ ಹಾಗೂ ಕಾಂಗ್ರೆಸ್ ಸರ್ಕಾರದ ಸಾಧನೆಯನ್ನು ನೋಡಿ ಜನರು ಮತ್ತೊಮ್ಮೆ ಗೆಲ್ಲಿಸುವ ವಿಶ್ವಾಸ ಇದೆ. ಭಾನುವಾರ ನಡೆದ ಜನಾಶೀರ್ವಾದ ಸಮಾವೇಶಕ್ಕೆ ನಿರೀಕ್ಷಿಸಿದಷ್ಟು ಜನರು ಬಂದು ಹರಸಿದರು. ಹತ್ತಾರು ಮದುವೆ, ಧಾರ್ಮಿಕ ಕಾರ್ಯಕ್ರಮಗಳು ಇದ್ದರೂ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಬಂದಿದ್ದು ನೋಡಿ ಸಂತಸವಾಯಿತು. ಕಾರ್ಯಕರ್ತರ ಆಶೀರ್ವಾದ ಪಡೆದು ನಾಮಪತ್ರ ಸಲ್ಲಿಸಿದ್ದೇನೆ. ನಾನು ಇನ್ನೊಂದು ಪಕ್ಷಕ್ಕೆ ಹೋಗುತ್ತೇನೆ ಎಂಬ ಅಪಪ್ರಚಾರಕ್ಕೆ ಈಗ ತೆರೆ ಬಿದ್ದಿದೆ ಎಂದು ಹೇಳಿದರು.