ಹಾಸನ: ಜಿಲ್ಲಾಧಿಕಾರಿ ವರ್ಗಾವಣೆ ಸಂಘರ್ಷಕ್ಕೆ ತೆರೆ ಬಿತ್ತು ಎನ್ನುವಷ್ಟರಲ್ಲಿಯೇ ಎಂಟು ದಿನಗಳ ಹಿಂದೆ ಅಧಿಕಾರ ವಹಿಸಿಕೊಂಡಿದ್ದ ಡಿ.ರಂದೀಪ್ ಅವರನ್ನು ಕೇಂದ್ರ ಚುನಾವಣಾ ಆಯೋಗದ ನಿರ್ದೇಶನ ಮೇರೆಗೆ ಸರ್ಕಾರ ವರ್ಗಾವಣೆ ಮಾಡಿದೆ.
ನೂತನ ಜಿಲ್ಲಾಧಿಕಾರಿಯಾಗಿ ಪಿ.ಸಿ.ಜಾಫರ್ ಅವರು ಮಂಗಳವಾರ ಸಂಜೆ ರಂದೀಪ್ ಅವರಿಂದ ಅಧಿಕಾರ ಸ್ವೀಕರಿಸಿದರು.