ಮೈಸೂರು: ಸರ್ಕಾರಿ ಹುದ್ದೆಯಲ್ಲಿದ್ದುಕೊಂಡು ಕಾಂಗ್ರೆಸ್ ಪರ ಪ್ರಚಾರ ನಡೆಸಿದ ಆರೋಪದ ಮೇಲೆ ಮೈಸೂರು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರಾದ ಬಿ.ಪಿ.ಮಹೇಶಚಂದ್ರ ಗುರು, ಅರವಿಂದ ಮಾಲಗತ್ತಿ ಅವರನ್ನು ಅಮಾನತು ಮಾಡಲಾಗಿದೆ.
ಕ್ರಮ ತೆಗೆದುಕೊಳ್ಳುವಂತೆ ರಾಜ್ಯ ಚುನಾವಣಾ ಆಯೋಗವು ಪತ್ರ ಬರೆದು ಸೂಚಿಸಿದ ಹಿನ್ನೆಲೆಯಲ್ಲಿ ವಿಶ್ವವಿದ್ಯಾನಿಲಯವು ಅಮಾನುಗೊಳಿಸಿ ಮಂಗಳವಾರ ಆದೇಶ ಹೊರಡಿಸಿದೆ.
ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದಲ್ಲಿ ಮಹೇಶಚಂದ್ರ ಗುರು ಕಾರ್ಯ ನಿರ್ವಹಿಸುತ್ತಿದ್ದರು. ಮಾಲಗತ್ತಿ ಅವರು ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಪ್ರಾಧ್ಯಾಪಕರಾಗಿದ್ದು, ಪ್ರಸ್ತುತ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿದ್ದಾರೆ.
ಈಚೆಗೆ ನಗರದಲ್ಲಿ ‘ಜನರಾಜಕಾರಣ’ ಕಾರ್ಯಕ್ರಮದ ಸಂದರ್ಭದಲ್ಲಿ ಕಾಂಗ್ರೆಸ್, ಸಿದ್ದರಾಮಯ್ಯ ಪರ ಪ್ರಚಾರ ನಡೆಸಿದ್ದರು ಎಂಬ ಆರೋಪ ಕೇಳಿಬಂದಿತ್ತು. ಪ್ರಾಧ್ಯಾಪಕರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಚುನಾವಣಾ ಅಧಿಕಾರಿಗಳು ವಿ.ವಿ.ಗೆ ಪತ್ರ ಬರೆದಿದ್ದರು.