ಜೆಡಿಎಸ್ ಅಭ್ಯರ್ಥಿ ಅಲ್ತಾಫ್ ಕಿತ್ತೂರ ಮಾತನಾಡಿ, ‘ಪಕ್ಷದ ವರಿಷ್ಠರು ಮೊದಲು ನನಗೆ ಬಿ– ಫಾರಂ ನೀಡಿದ್ದಾರೆ. ಅದರೊಂದಿಗೆ ಮೊದಲು ನಾನೇ ಚುನಾವಣಾ ಅಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದ್ದೇನೆ. ತಮ್ಮ ಮತ್ತು ಗುರುರಾಜ ಹುಣಸಿಮರದ ಅವರ ನಡುವೇ ಯಾವುದೇ ಗೊಂದಲ ಇಲ್ಲ. ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ ಮಾಡಿದ್ದನ್ನು ಪಕ್ಷದ ಮುಖಂಡರು ನೋಡಿದ್ದಾರೆ. ಹೀಗಾಗಿ, ನನಗೆ ಟಿಕೆಟ್ ನೀಡಿದ್ದಾರೆ’ ಎಂದರು.