ಮಳೆ ಕಾದು ನಿಂತಿದ್ದ ಭೂಮಿಯನ್ನು ಸ್ವಲ್ಪಮಟ್ಟಿಗೆ ತಣ್ಣಗಾಗಿಸಿತು. ಮುಳ್ಳುಸೋಗೆ ಗ್ರಾ.ಪಂ. ವ್ಯಾಪ್ತಿಯ ಗೊಂದಿಬಸವನಹಳ್ಳಿ, ಕೂಡ್ಲೂರು ಮಂಟಿ, ಚಿಕ್ಕಹೊಸೂರು ವ್ಯಾಪ್ತಿಯಲ್ಲಿ ಮರಗಳು ಧರೆಗೆ ಉರುಳಿವೆ. ಕೆಲವು ಕಡೆಗಳಲ್ಲಿ ವಿದ್ಯುತ್ ಕಂಬಗಳಿಗೂ ಹಾನಿಯಾಗಿರುವ ಕಾರಣ ವಿದ್ಯುತ್ ಸರಬರಾಜು ಸ್ಥಗಿತಗೊಂಡಿದೆ. ಮುಳ್ಳುಸೋಗೆ, ಗುಮ್ಮನಕೊಲ್ಲಿ, ಕೂಡುಮಂಗಳೂರು, ಕೂಡಿಗೆ, ಹೆಬ್ಬಾಲೆ, ಅಳುವಾರ, ಸಿದ್ದಲಿಂಗಪುರ, ಗುಡ್ಡೆಹೊಸೂರು ಸೇರಿದಂತೆ ಅನೇಕ ಗ್ರಾಮಗಳಲ್ಲಿ ಜೋರಾಗಿ ಮಳೆ ಸುರಿದೆ.