ಹಿಂದುಳಿದ ಜಾತಿಗಳ ಪಟ್ಟಿಯಲ್ಲಿನ ಬೈರಾಗಿ ಜಾತಿಯ ಮಂಜುನಾಥ್ ಚುನಾವಣಾ ಆಯೋಗಕ್ಕೆ ನಕಲಿ ಜಾತಿ ಪ್ರಮಾಣಪತ್ರ ಸಲ್ಲಿಸಿದ್ದಾರೆ ಎಂದು ಆರೋಪಿಸಿ ಅವರ ಪ್ರತಿಸ್ಪರ್ಧಿ ಜೆಡಿಎಸ್ನ ಮುನಿಆಂಜಿನಪ್ಪ ತಹಶೀಲ್ದಾರ್ಗೆ ದೂರು ಕೊಟ್ಟಿದ್ದರು. ಈ ಬಗ್ಗೆ ತನಿಖೆ ನಡೆಸಿದ್ದ ತಹಶೀಲ್ದಾರ್, ಮಂಜುನಾಥ್ ಅವರು ಬುಡ್ಗ ಜಂಗಮ ಜಾತಿಗೆ ಸೇರಿಲ್ಲವೆಂದು ಜಾತಿ ಪ್ರಮಾಣಪತ್ರ ರದ್ದುಪಡಿಸಿದ್ದರು. ತಹಶೀಲ್ದಾರ್ ಕ್ರಮವನ್ನು ಪ್ರಶ್ನಿಸಿ ಮಂಜುನಾಥ್ ಹೈಕೋರ್ಟ್ ಮೆಟ್ಟಿಲೇರಿದ್ದರು.