ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ದೌರ್ಜನ್ಯಕ್ಕೆ ಬೆದರುವುದಿಲ್ಲ: ಬಬಲೇಶ್ವರ ಭೇಟಿ ನಿಲ್ಲಿಸುವುದಿಲ್ಲ!’

ಶ್ರೀಶೈಲ ಪೀಠದ ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯರ ಹೇಳಿಕೆ
Last Updated 25 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ವಿಜಯಪುರ: ತಮ್ಮ ಮೇಲಿನ ದಾಳಿಗೆ ಬೆದರುವುದಿಲ್ಲ ಎಂದಿರುವ ಶ್ರೀಶೈಲ ಪೀಠದ ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯರು, ನಿಗದಿಯಾದಂತೆ ಮೇ ಮೊದಲ ವಾರದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಿಗೆ ಭೇಟಿ ನೀಡುವುದಾಗಿ ಬುಧವಾರ ಇಲ್ಲಿ ಹೇಳಿದರು.

ಧರ್ಮ ಪ್ರಚಾರದ ತಮ್ಮ ಕರ್ತವ್ಯದಿಂದ ಎಂದೂ ವಿಮುಖರಾಗುವುದಿಲ್ಲ. ಬಾಡಿಗೆ ಕಿಡಿಗೇಡಿಗಳ ದೌರ್ಜನ್ಯಕ್ಕೆ ಕಿಮ್ಮತ್ತು ನೀಡುವುದಿಲ್ಲ ಎಂದ ಅವರು, ತಮ್ಮ ಕಾರ್ಯಕ್ಕೆ ಪದೇ ಪದೇ ಅಡ್ಡಿಯಾದರೆ ಪೊಲೀಸ್‌ ರಕ್ಷಣೆ ಪಡೆದು ಬಬಲೇಶ್ವರದಲ್ಲಿ ಸಂಚರಿಸುವುದಾಗಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಪಂಚಪೀಠಾಧೀಶರು ಧಾರ್ಮಿಕ ಕಾರ್ಯಕ್ಕಾಗಿ ಪ್ರವಾಸ ಮಾಡುತ್ತಿದ್ದಾರೆ. ಆದರೆ, ಬಿಜೆಪಿ ಪರವಾಗಿ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ. ರಾಜ್ಯದ 223 ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯದ ವಿದ್ಯಮಾನ ಬಬಲೇಶ್ವರದಲ್ಲಿ ಮಾತ್ರ ನಡೆಯುತ್ತಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT