‘ಹತ್ಯೆಗೂ ಮುನ್ನ ರಾಜರಾಜೇಶ್ವರಿನಗರದ ಗೌರಿ ಲಂಕೇಶ್ ಅವರ ಮನೆ ಬಳಿಯೇ ಓಡಾಡಿದ್ದ ನವೀನ್, ಅವರ ಚಲನವಲನಗಳನ್ನು ತಿಳಿದುಕೊಂಡಿದ್ದ. ಈ ಪ್ರಕರಣದಲ್ಲಿ ಅನುಮಾನದ ಮೇಲೆ 537 ಮೊಬೈಲ್ ಕರೆಗಳ ಪರಿಶೀಲನೆ ನಡೆಸಿದ್ದೆವು. ಅದರಿಂದ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಕೆಲ ಸಂಘಟನೆಗಳ ಮುಖಂಡರ ಮೊಬೈಲ್ ಸಂಭಾಷಣೆಯನ್ನೂ ಆಲಿಸುತ್ತಿದ್ದೆವು. ಆಗ ನವೀನ್, ಪ್ರೊ. ಕೆ.ಎಸ್. ಭಗವಾನ್ ಅವರನ್ನು ಕೊಲೆ ಮಾಡುವ ಬಗ್ಗೆ ಕೆಲವರೊಂದಿಗೆ ಮಾತನಾಡಿದ್ದು ಗೊತ್ತಾಯಿತು. ಕೂಡಲೇ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಗೌರಿ ಹತ್ಯೆಯಲ್ಲಿ ಆತನ ಪಾತ್ರವಿರುವುದು ಖಚಿತವಾಯಿತು’ ಎಂದು ಮೂಲಗಳು ಹೇಳಿವೆ.