ಈ ರಸ್ತೆಯಲ್ಲಿ ಶುಲ್ಕ ಸಂಗ್ರಹಿಸಲು ಭದ್ರತೆ ಒದಗಿಸಬೇಕು ಎಂದು, ನವಯುಗ ಸಂಸ್ಥೆ ಹೈಕೋರ್ಟ್ ಮೆಟ್ಟಿಲೇರಿಸಿತ್ತು. ಮನವಿ ಪುರಸ್ಕರಿಸಿದ ಹೈಕೋರ್ಟ್, ಬೆಂಗಳೂರು-ಹೈದರಾಬಾದ್ ಮಾರ್ಗದ ರಾಷ್ಟ್ರೀಯ ಹೆದ್ದಾರಿ –7ರಲ್ಲಿರುವ (ಬಳ್ಳಾರಿ ರಸ್ತೆ) ದೇವನಹಳ್ಳಿ ಟೋಲ್ಗೇಟ್ಗೆ ತಕ್ಷಣವೇ ಸೂಕ್ತ ಪೊಲೀಸ್ ರಕ್ಷಣೆ ಒದಗಿಸುವಂತೆ ನಗರ ಪೊಲೀಸ್ ಕಮಿಷನರ್ಗೆ ಸೋಮವಾರ ಆದೇಶಿಸಿತ್ತು. ಈ ಆದೇಶದ ಹಿನ್ನೆಲೆಯಲ್ಲಿ ಪೊಲೀಸರು ಟೋಲ್ಗಳಿಗೆ ಭದ್ರತೆ ಒದಗಿಸಿದ್ದಾರೆ.