ಇಂದು ಮಲ್ಹೊತ್ರಾ ಉತ್ತಮ ವಕೀಲೆ ಮತ್ತು ಸಮರ್ಥ ನ್ಯಾಯಮೂರ್ತಿ ಎಂಬುದನ್ನು ಸಾಬೀತುಪಡಿಸಬಲ್ಲರು. ಆದರೆ ಕೆ.ಎಂ.ಜೋಸೆಫ್ ಅವರ ನೇಮಕಾತಿ ಶಿಫಾರಸಿಗೆ ಸರ್ಕಾರ ಅನುಮೋದನೆ ನೀಡದಿರಲು ಸಾಧ್ಯವೇ ಇಲ್ಲ. ಒಬ್ಬರ ನೇಮಕಕ್ಕೆ ಅನುಮೋದನೆ ನೀಡಿ ಮತ್ತೊಬ್ಬರ ನೇಮಕಕ್ಕೆ ಸಮ್ಮತಿ ಸೂಚಿಸುವ ಮೂಲಕ ನ್ಯಾಯಾಂಗದ ಕೆಲಸದಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಿದೆ. ಇದು ಗಂಭೀರ ವಿಚಾರ ಎಂಬುದಾಗಿ ಸುಪ್ರೀಂ ಕೋರ್ಟ್ ವಕೀಲರ ಸಂಘದ ಅಧ್ಯಕ್ಷ, ವಕೀಲ ವಿಕಾಸ್ ಸಿಂಗ್ ಹೇಳಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.