‘ನಾನು ಜೆಡಿಎಸ್ ಪಕ್ಷದಿಂದ ಟಿಕೆಟ್ ಪಡೆದು ಸ್ಪರ್ಧೆ ಮಾಡುತ್ತಿದ್ದೇನೆ. ವರ್ತೂರು ಪ್ರಕಾಶ್ ನನಗೆ ಪ್ರಬಲ ಎದುರಾಳಿ. ಅವರನ್ನು ಚುನಾವಣೆಯಲ್ಲಿ ಹೇಗೆ ಸೋಲಿಸಬೇಕೆಂದು ನನಗೆ ಚೆನ್ನಾಗಿ ಗೊತ್ತಿದೆ. ಹಿಂದಿನ ಎರಡು ಚುನಾವಣೆಗಳಲ್ಲಿ ಕ್ಷೇತ್ರದ ಜನ ಆ ಮಹಾನುಭಾವನನ್ನು ಆಯ್ಕೆ ಮಾಡಿದ್ದಕ್ಕೆ ಬೇಸರಗೊಂಡಿದ್ದಾರೆ. ಕ್ಷೇತ್ರದಲ್ಲಿ ಈ ಬಾರಿ ಬದಲಾವಣೆಯ ಗಾಳಿ ಬೀಸಿದ್ದು, ಜೆಡಿಎಸ್ ಪರವಾದ ಅಲೆ ಎದ್ದಿದೆ’ ಎಂದರು.