ನಂತರ ವಾಸವಿ ಕಲ್ಯಾಣ ಮಂಟಪದಲ್ಲಿ ನಡೆದ ಜಯಂತ್ಯುತ್ಸವದಲ್ಲಿ ಪ್ರತಿಭಾ ಪುರಸ್ಕಾರ, ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಣೆ, ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.
ಕರ್ನಾಟಕ ಆರ್ಯವೈಶ್ಯ ಮಹಾಮಂಡಳಿ ರಾಜ್ಯ ಸಂಘಟನಾ ಕಾರ್ಯದರ್ಶಿ ಡಿ.ವಿ. ಸತ್ಯನಾರಾಯಣ ಸಂಘಟನೆ ಕುರಿತು ಮಾತನಾಡಿದರು. ಆರ್ಯವೈಶ್ಯ ಸಂಘದ ಆಡಳಿತ ಮಂಡಳಿ ಅಧ್ಯಕ್ಷ ಡಿ.ವಿ. ಸುಬ್ಬಾರಾವ್, ಕರ್ನಾಟಕ ಆರ್ಯವೈಶ್ಯ ಮಹಾಸಭೆ ನಿರ್ದೇಶಕ ಜಿ. ರಾಜಾರಾವು, ಕೋಶಾಧ್ಯಕ್ಷ ಜಿ.ಬಿ. ಕೋಟೇಶ್ವರ್, ಪ್ರಮುಖರಾದ ಶ್ರೀನಿವಾಸ ಕೆ. ರಾಜೇಂದ್ರ, ಡಿ.ಗುರುಕೃಷ್ಣ, ಬಿ. ಚನ್ನಲಕ್ಷ್ಮಿ ಸುಬ್ಬಾರಾವ್, ಡಿ. ಶ್ರೀಧರಶ್ರೇಷ್ಠಿ, ವೈ. ಮಂಜುನಾಥ ಶ್ರೇಷ್ಠಿ ಉಪಸ್ಥಿತರಿದ್ದರು.