ಧಾರವಾಡ ಕ್ಷೇತ್ರದ 10 ಅಭ್ಯರ್ಥಿಗಳ, ಹುಬ್ಬಳ್ಳಿ– ಧಾರವಾಡ ಪೂರ್ವ ಕ್ಷೇತ್ರದ 12, ಹುಬ್ಬಳ್ಳಿ– ಧಾರವಾಡ ಕೇಂದ್ರ ಕ್ಷೇತ್ರದ 30 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ. ಶ್ರೀಕಾಂತ ಮಗಜಿಕೊಂಡಿ ಅವರು ಕೆಜೆಪಿ ಹಾಗೂ ಸಾಮಾನ್ಯ ಜನತಾ ಪಾರ್ಟಿಯಿಂದ ಎರಡು ಪ್ರತ್ಯೇಕ ನಾಮಪತ್ರಗಳನ್ನು ಸಲ್ಲಿಸಿದ್ದರು. ಮೊದಲು ಕೆಜೆಪಿಯಿಂದ ನಾಮಪತ್ರ ಸಲ್ಲಿಸಿದ್ದರಿಂದ ಕೆಜೆಪಿ ಅಭ್ಯರ್ಥಿ ಎಂದೇ ಪರಿಗಣಿಸಲಾಗಿದೆ’ ಎಂದು ಚುನಾವಣಾಧಿಕಾರಿ ಇಬ್ರಾಹಿಂ ಮೈಗೂರ ತಿಳಿಸಿದ್ದಾರೆ. ನಾಮಪತ್ರ ಹಿಂಪಡೆಯಲು ಏ. 27 ಕೊನೆಯ ದಿನವಾಗಿದೆ.