ಬುಧವಾರ ಕಣ್ಣಿ ತರಕಾರಿ ಮಾರುಕಟ್ಟೆ ಹಾಗೂ ಬಸ್ ನಿಲ್ದಾಣದಲ್ಲಿ ಜಿಲ್ಲಾ ಸ್ವೀಪ್ ಸಮಿತಿ ತಂಡವು ಕರಪತ್ರಗಳನ್ನು ಹಂಚಿತು. ಮೇ 12ರಂದು ವಿಧಾನಸಭಾ ಚುನಾವಣೆಯ ಮತದಾನ ನಡೆಯ ಲಿದ್ದು, ಎಲ್ಲರೂ ಕಡ್ಡಾಯವಾಗಿ ಮತ ಚಲಾಯಿಸಬೇಕು. ಮತದಾನಕ್ಕಾಗಿ ಯಾವುದೇ ಆಸೆ-ಆಮಿಷಗಳಿಗೆ ಒಳಗಾಗದೇ ನೈತಿಕ ಮತದಾನ ಮಾಡಬೇಕು. ಮತದಾನ ಎಲ್ಲರ ಮೂಲಭೂತ ಹಕ್ಕು ಮತ್ತು ಕರ್ತವ್ಯವಾಗಿದೆ ಎಂದು ಹೇಳಿತು.