ಬೆಂಗಳೂರು: ಮೊಹಮ್ಮದ್ ಅಜರುದ್ದೀನ್, ಖುಷ್ಬೂ, ಮಾಲಾಶ್ರೀ, ರಮ್ಯಾ, ಅಂಬರೀಷ್, ಹೇಮಾ ಮಾಲಿನಿ, ಪ್ರಧಾನಿ ಮೋದಿ ಸೇರಿ ಅನೇಕರು ಕರ್ನಾಟಕ ವಿಧಾನಸಭಾ ಚುನಾವಣೆಯ ತಾರಾ ಪ್ರಚಾರಕರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ವಿವಿಧ ಪಕ್ಷಗಳು ತಾರಾ ಪ್ರಚಾರಕರ ಪಟ್ಟಿಯನ್ನು ಗುರುವಾರ ಚುನಾವಣಾ ಆಯೋಗಕ್ಕೆ ಸಲ್ಲಿಸಿ ಅನುಮತಿ ಕೋರಿವೆ.
ಕಾಂಗ್ರೆಸ್ ಹಾಗೂ ಬಿಜೆಪಿ ತಲಾ 40 ಜನರನ್ನು ತಾರಾ ಪ್ರಚಾರಕರ ಪಟ್ಟಿಯಲ್ಲಿ ಸೇರಿಸಿದೆ.