ಮರಿಯಮ್ಮನಹಳ್ಳಿ ಉಪ ವಲಯ ಅರಣ್ಯದ ನಂದಿಬಂಡಿ, ವರದಾಪುರ ಸೇರಿದಂತೆ ಇತರೆ ಗ್ರಾಮಗಳ ಸುತ್ತಮುತ್ತಲ ಅರಣ್ಯ ಪ್ರದೇಶದಲ್ಲಿ ಹಲವು ಚಿರತೆಗಳು ಇವೆ. ರಾತ್ರಿ ಸಮಯದಲ್ಲಿ ಆಹಾರ ಹುಡುಕಿಕೊಂಡು ಹೆದ್ದಾರಿ ದಾಟುತ್ತಿದ್ದ ಸಮಯದಲ್ಲಿ ಅಪಘಾತ ಸಂಭವಿಸಿರಬಹುದು ಎಂದು ಹೊಸಪೇಟೆ ವಲಯ ಅರಣ್ಯಾಧಿಕಾರಿ ನಾಗರಾಜ್ ತಿಳಿಸಿದ್ದಾರೆ.