‘ಕೆಲ ಕಾರಣಗಳಿಂದಾಗಿ ಬಿಸಿಸಿಐ ದ್ರೋಣಾಚಾರ್ಯ ಪ್ರಶಸ್ತಿಗೆ ಹೆಸರು ಶಿಫಾರಸು ಮಾಡುವುದನ್ನು ನಿಲ್ಲಿಸಿತ್ತು. ಹೋದ ವರ್ಷ ಕೊಹ್ಲಿ ಅವರ ಬಾಲ್ಯದ ಕೋಚ್ ರಾಜಕುಮಾರ್ ಶರ್ಮಾ ಅವರಿಗೆ ಪ್ರಶಸ್ತಿ ನೀಡಲಾಗಿತ್ತು. ರಾಜಕುಮಾರ್ ಪ್ರಶಸ್ತಿಗೆ ಅರ್ಜಿ ಹಾಕಿದ್ದರು. ಅವರನ್ನು ಬಿಸಿಸಿಐ ನಾಮ ನಿರ್ದೇಶನ ಮಾಡಿರಲಿಲ್ಲ. ಭಾರತದ ಜೂನಿಯರ್ ತಂಡ ವಿಶ್ವಕಪ್ ಗೆಲ್ಲುವಲ್ಲಿ ರಾಹುಲ್ ಅವರ ಪಾತ್ರ ಮಹತ್ವದ್ದು. ಹೀಗಾಗಿ ಅವರ ಹೆಸರನ್ನು ಈ ಬಾರಿ ಪ್ರಶಸ್ತಿಗೆ ಶಿಫಾರಸು ಮಾಡಲಾಗಿದೆ’ ಎಂದು ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.