ಶಾಂತಿ ನಡಿಗೆಯಲ್ಲಿ ಭಾಗವಹಿಸಿದ್ದ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಪ್ಪು ಉಡುಗೆ ಧರಿಸಿ ಶಾಂತಿಯ ಸಂಕೇತವಾಗಿ ಬಿಳಿ ಬಟ್ಟೆಯನ್ನು ಹಣೆಗೆ ಕಟ್ಟಿಕೊಂಡಿದ್ದರು.
‘ಅತ್ಯಾಚಾರಿಗಳಿಗೆ ನಮ್ಮ ಸಮಾಜದಲ್ಲಿ ಸ್ಥಳವಿಲ್ಲ’, ‘ಅತ್ಯಾಚಾರಕ್ಕೆ ಧರ್ಮವಿಲ್ಲ’, ‘ಪುರುಷ ಮನಸ್ಥಿತಿಯಿಂದ ಹೊರಬಂದು ನಮ್ಮನ್ನು ನೋಡಿ’ ಎಂಬ ಘೋಷವಾಕ್ಯಗಳನ್ನು ಒಳಗೊಂಡ ಭಿತ್ತಿಚಿತ್ರಗಳನ್ನು ಹಿಡಿದು ಶಾಂತಿ ನಗರದ ಸೇಂಟ್ ಜೋಸೆಫ್ ಕಾಲೇಜು ಆವರಣದಿಂದ ಪುರಭವನದವರೆಗೆ ಸಾಗಿದರು.