‘ವಿಮಾನ ಇಳಿಯುವಾಗ ಕಾಣಿಸಿಕೊಂಡ ತಾಂತ್ರಿಕ ಸಮಸ್ಯೆ ಸಂಶಯಕ್ಕೆ ಎಡೆ ಮಾಡಿಕೊಟ್ಟಿದೆ. ಹಾಗಾಗಿ, ಈ ಕುರಿತು ತನಿಖೆ ನಡೆಸಬೇಕು’ ಎಂದು ರಾಹುಲ್ ಗಾಂಧಿ ಅವರ ಆಪ್ತ ಸಹಾಯಕ ಕೌಶಲ್ ವಿದ್ಯಾರ್ಥಿ ಅವರು, ಡಿಜಿಪಿ ನೀಲಮಣಿ ಎನ್. ರಾಜು ಅವರಿಗೆ ಪತ್ರ ಬರೆದಿದ್ದಾರೆ. ಇದರ ಪ್ರತಿಯನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶಾಕೀರ್ ಸನದಿ ಅವರು ಗೋಕುಲ ರೋಡ್ ಪೊಲೀಸ್ ಠಾಣೆಗೆ ತಲುಪಿಸಿದ್ದರು. ಅದನ್ನೇ ದೂರಾಗಿ
ಸ್ವೀಕರಿಸಲಾಗಿದೆ.