ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳದಲ್ಲಿ ನೌಕಾಪಡೆ 17 ಸಾವಿರ ಜನರನ್ನು ರಕ್ಷಿಸಿದೆ: ಅಡ್ಮಿರಲ್‌ ಸುನಿಲ್‌ ಲಾಂಬಾ

Last Updated 30 ಆಗಸ್ಟ್ 2018, 1:55 IST
ಅಕ್ಷರ ಗಾತ್ರ

ತಿರುವನಂತಪುರ:ಕೇರಳದಲ್ಲಿ ಭಾರಿ ಮಳೆಯಿಂದ ಪ್ರವಾಹ ಉಂಟಾಗಿ ಸಂಕಷ್ಟದಲ್ಲಿದ್ದ 17 ಸಾವಿರ ಜನರನ್ನು ಭಾರತೀಯ ನೌಕಾಪಡೆ ರಕ್ಷಿಸಿದೆ ಎಂದು ನೌಕಾಪಡೆ ಅಡ್ಮಿರಲ್‌ ಸುನಿಲ್‌ ಲಾಂಬಾ ಹೇಳಿದ್ದಾರೆ.

ಎರ್ನಾಕುಲಂ ಜಿಲ್ಲೆಯ ಮಟ್ಟಿನಾಕಂ ಗ್ರಾಮಕ್ಕೆ ಭೇಟಿ ನೀಡಿ, ಪ್ರವಾಹ ರಕ್ಷಣಾ ಕಾರ್ಯಾಚರಣೆ, ಪರಿಹಾರ ಮತ್ತು ಪುನರ್ವಸತಿ ಪ್ರಕ್ರಿಯೆಯನ್ನು ಪರಿಶೀಲಿಸಿದ ವೇಳೆ ಅವರು ಮಾಹಿತಿ ನೀಡಿದರು.

₹25 ಲಕ್ಷ ಮೌಲ್ಯದ ಪರಿಹಾರ ಸಾಮಗ್ರಿ

ಇದೇ ವೇಳೆ, ಪ್ರವಾಹ ಸಂತ್ರಸ್ತರಿಗೆ ನೌಕಾಪಡೆಯ ಕ್ಷೇಮಾಭಿವೃದ್ಧಿ ಸಂಘದಿಂದ ನೀಡಿದ್ದ ₹25 ಲಕ್ಷ ಮೌಲ್ಯದ ಪರಿಹಾರ ಸಾಮಗ್ರಿಗಳನ್ನು ಅವರು ಹಸ್ತಾಂತರಿಸಿದರು.

ಒಂದು ದಿನದ ವೇತನ
ಸಂಕಷ್ಟದಲ್ಲಿರುವ ಸಂತ್ರಸ್ತರ ನೆರವಿಗೆ ಮುಂದಾಗಿರುವ ನಮ್ಮ ನೌಕಾಪಡೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಒಂದು ದಿನದ ವೇತನನ್ನು ದೇಣಿಗೆ ನೀಡಿದ್ದೇವೆ. ಈ ದೇಣಿಗೆಯ ಚೆಕ್‌ಅನ್ನು ಕೇರಳ ಮುಖ್ಯಮಂತ್ರಿ ಅವರಿಗೆ ನೀಡುತ್ತೇವೆ ಎಂದು ಸುನಿಲ್‌ ಲಾಂಬಾ ತಿಳಿಸಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT