ಡೆಹ್ರಾಡೂನ್: ಉತ್ತರದ ಆರು ರಾಜ್ಯಗಳಲ್ಲಿ ನಡೆಯಲಿರುವ ಮಾದಕದ್ರವ್ಯ ವಿರೋಧಿ ಅಭಿಯಾನದಲ್ಲಿ ಬಾಲಿವುಡ್ ನಟ ಸಂಜಯ್ ದತ್ ಪಾಲ್ಗೊಳ್ಳಲಿದ್ದಾರೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಹೇಳಿದ್ದಾರೆ.
‘ವೃತ್ತಿಜೀವನದ ಆರಂಭದಲ್ಲಿ ನಾನು ಮಾದಕ ವ್ಯಸನಿಯಾಗಿ ತೊಂದರೆ ಅನುಭವಿಸಿದ್ದೆ. ಈ ಕಾರಣಕ್ಕೆ ಅಭಿಯಾನದಲ್ಲಿ ರಾಯಭಾರಿಯಾಗಿ ಪಾಲ್ಗೊಳ್ಳುತ್ತೇನೆ’ ಎಂದು ಸಂಜಯ್ ದತ್ ತಿಳಿಸಿರುವುದಾಗಿ ತ್ರಿವೇಂದ್ರ ಸಿಂಗ್ ಹೇಳಿದ್ದಾರೆ.
ಉತ್ತರಾಖಂಡ, ಹಿಮಾಚಲ ಪ್ರದೇಶ, ಪಂಜಾಬ್, ಹರಿಯಾಣ, ದೆಹಲಿ ಮತ್ತು ರಾಜಸ್ಥಾನದಲ್ಲಿ ಅಭಿಯಾನ ನಡೆಯಲಿದೆ.
ಕೇಂದ್ರಾಡಳಿತ ಪ್ರದೇಶವಾದ ಚಂಡಿಗಡ ಕೂಡ ಮಾದಕದ್ರವ್ಯ ವಿರೋಧಿ ಹೋರಾಟದಲ್ಲಿ ಕೈಜೋಡಿಸಿದೆ ಎಂದಿದ್ದಾರೆ.