ಕಾಂಗ್ರೆಸ್ ಅಭ್ಯರ್ಥಿ ಜೆ.ಎನ್. ಗಣೇಶ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. 2013ರ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ವಂಚಿತರಾಗಿದ್ದ ಗಣೇಶ ಅವರು, ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಸುರೇಶ್ ಬಾಬು ವಿರುದ್ಧವೇ ಸೋತಿದ್ದರು. ಈ ಬಾರಿ ಅನುಕಂಪದ ಅಲೆ ಮತ್ತು ಹಾಲಿ ಶಾಸಕರ ವಿರುದ್ಧ ಜನಸಾಮಾನ್ಯರ ಅಸಮಾಧಾನ ಎರಡು ಅಂಶಗಳು ಗಣೇಶ ಅವರ ಗೆಲುವಿಗೆ ಕಾರಣವಾಗಿವೆ ಎನ್ನಲಾಗುತ್ತಿದೆ.