2008ರಲ್ಲಿ ಬಿಜೆಪಿ, 2013ರಲ್ಲಿ ಬಿ.ಎಸ್.ಆರ್. ಕಾಂಗ್ರೆಸ್ನಿಂದ ಗೆದ್ದಿದ್ದ ಟಿ.ಎಚ್. ಸುರೇಶಬಾಬು ಈ ಸಲದ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದರು. ಚುನಾವಣೆಗೂ ಮುನ್ನ ಅವರು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ, ಅಂತಿಮವಾಗಿ ಬಿಜೆಪಿ ಹುರಿಯಾಳು ಆಗಿ ಕಣಕ್ಕಿಳಿದಿದ್ದರು. ಎರಡು ಅವಧಿಗೆ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಮಾಡಲಿಲ್ಲ. ಜತೆಗೆ ಜನರೊಂದಿಗೆ ಸಂಪರ್ಕದಲ್ಲಿ ಇರಲಿಲ್ಲ ಎಂಬ ದೂರುಗಳು ವ್ಯಾಪಕವಾಗಿ ಕೇಳಿ ಬಂದಿದ್ದವು. ಅಂತಿಮವಾಗಿ ಜನ ಬದಲಾವಣೆ ಬಯಸಿ, ಗಣೇಶ ಅವರನ್ನು ಆಯ್ಕೆ ಮಾಡಿದ್ದಾರೆ.