<p><strong>ಬೆಂಗಳೂರು: </strong>ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು ಗುರುವಾರ ಮಧ್ಯಾಹ್ನ 12.20ಕ್ಕೆ ಮುಖ್ಯಮಂತ್ರಿ ಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.</p>.<p>ಈ ಸಂಬಂಧ ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ(ಶಿಷ್ಟಾಚಾರ) ಇಲಾಖೆಗೆ ರಾಜಭವನದಿಂದ ಸೂಚನೆ ರವಾನೆಯಾಗಿದೆ ಎಂದು ಮೂಲಗಳು ಹೇಳಿವೆ.</p>.<p>ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿ ಮಾಡಿದ್ದ ಬಿಜೆಪಿ ನಿಯೋಗ, ನಮ್ಮಪಕ್ಷ 105 ಸದಸ್ಯರ ಬಲ ಹೊಂದಿದ್ದು, ಅತಿ ಹೆಚ್ಚು ಸಂಖ್ಯಾಬಲ ಇರುವ ಏಕೈಕ ಪಕ್ಷವಾಗಿದೆ. ಹೀಗಾಗಿ ಸರ್ಕಾರ ರಚನೆಗೆ ನಮಗೇ ಅವಕಾಶ ನೀಡಬೇಕು ಎಂದು ಮನವರಿಕೆ ಮಾಡಿಕೊಟ್ಟಿದೆ.</p>.<p>ಗುಜರಾತಿನವರಾದ ರಾಜ್ಯಪಾಲ ವಜುಭಾಯಿ ವಾಲಾ ಆರೆಸ್ಸೆಸ್ ಹಿನ್ನೆಲೆಯವರು. ಗುಜರಾತ್ ಸರ್ಕಾರದಲ್ಲಿ ಹಣಕಾಸು ಸಚಿವರಾಗಿ, ಬಳಿಕ ಸ್ಪೀಕರ್ ಆಗಿ ಕೆಲಸ ಮಾಡಿದವರು. ಪ್ರಧಾನಿ ಮೋದಿ ಅವರು ಗುಜರಾತ್ ಮುಖ್ಯಮಂತ್ರಿ ಆಗಿದ್ದಾಗ ಅವರ ಜತೆ ಉತ್ತಮ ಒಡನಾಟ ಹೊಂದಿದವರು. ಈ ಬಾಂಧವ್ಯ ಬಳಸಿಕೊಂಡು ಸರ್ಕಾರ ರಚನೆ ಮಾಡಲು ಬಿಜೆಪಿ ಮುಂದಾಗಿದೆ ಎಂದೂ ಹೇಳಲಾಗಿದೆ.</p>.<p><strong>ಕೆಪಿಜೆಪಿಯ ಆರ್. ಶಂಕರ್ ಬಿಜೆಪಿ ತೆಕ್ಕೆಗೆ</strong><br /> ರಾಣೆಬೆನ್ನೂರು ಕ್ಷೇತ್ರದಿಂದ ಕರ್ನಾಟಕ ಪ್ರಜಾ ಜನತಾ ಪಕ್ಷ(ಕೆಪಿಜೆಪಿ)ದಿಂದ ಆಯ್ಕೆ ಆಗಿರುವ ಆರ್. ಶಂಕರ್ ಬಿಜೆಪಿ ಪಾಳಯ ಸೇರಿದ್ದಾರೆ.</p>.<p>ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಪಾಲ್ಗೊಂಡಿದ್ದ ಶಂಕರ್, ಶಾಸಕಾಂಗ ಪಕ್ಷದ ನಾಯಕರಾಗಿ ಯಡಿಯೂರಪ್ಪ ಅವರನ್ನು ಆಯ್ಕೆ ಮಾಡುವಾಗ ಅವರು ಸೂಚಕರಾಗಿ ಸಹಿಮಾಡಿದ್ದಾರೆ.</p>.<p>ರಾಜ ಭವನಕ್ಕೆ ಬಿಜೆಪಿ ನಿಯೋಗ ಭೇಟಿ ಮಾಡಿದಾಗ ಶಂಕರ್ ಕೂಡ ಇದ್ದರು. ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ಅವರ ಆಪ್ತರೂ ಆಗಿರುವ ಶಂಕರ್, ಹಳೆಯ ಸಖ್ಯದ ಕಾರಣಕ್ಕೆ ಅವರ ಜತೆ ಗುರುತಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು ಗುರುವಾರ ಮಧ್ಯಾಹ್ನ 12.20ಕ್ಕೆ ಮುಖ್ಯಮಂತ್ರಿ ಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.</p>.<p>ಈ ಸಂಬಂಧ ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ(ಶಿಷ್ಟಾಚಾರ) ಇಲಾಖೆಗೆ ರಾಜಭವನದಿಂದ ಸೂಚನೆ ರವಾನೆಯಾಗಿದೆ ಎಂದು ಮೂಲಗಳು ಹೇಳಿವೆ.</p>.<p>ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿ ಮಾಡಿದ್ದ ಬಿಜೆಪಿ ನಿಯೋಗ, ನಮ್ಮಪಕ್ಷ 105 ಸದಸ್ಯರ ಬಲ ಹೊಂದಿದ್ದು, ಅತಿ ಹೆಚ್ಚು ಸಂಖ್ಯಾಬಲ ಇರುವ ಏಕೈಕ ಪಕ್ಷವಾಗಿದೆ. ಹೀಗಾಗಿ ಸರ್ಕಾರ ರಚನೆಗೆ ನಮಗೇ ಅವಕಾಶ ನೀಡಬೇಕು ಎಂದು ಮನವರಿಕೆ ಮಾಡಿಕೊಟ್ಟಿದೆ.</p>.<p>ಗುಜರಾತಿನವರಾದ ರಾಜ್ಯಪಾಲ ವಜುಭಾಯಿ ವಾಲಾ ಆರೆಸ್ಸೆಸ್ ಹಿನ್ನೆಲೆಯವರು. ಗುಜರಾತ್ ಸರ್ಕಾರದಲ್ಲಿ ಹಣಕಾಸು ಸಚಿವರಾಗಿ, ಬಳಿಕ ಸ್ಪೀಕರ್ ಆಗಿ ಕೆಲಸ ಮಾಡಿದವರು. ಪ್ರಧಾನಿ ಮೋದಿ ಅವರು ಗುಜರಾತ್ ಮುಖ್ಯಮಂತ್ರಿ ಆಗಿದ್ದಾಗ ಅವರ ಜತೆ ಉತ್ತಮ ಒಡನಾಟ ಹೊಂದಿದವರು. ಈ ಬಾಂಧವ್ಯ ಬಳಸಿಕೊಂಡು ಸರ್ಕಾರ ರಚನೆ ಮಾಡಲು ಬಿಜೆಪಿ ಮುಂದಾಗಿದೆ ಎಂದೂ ಹೇಳಲಾಗಿದೆ.</p>.<p><strong>ಕೆಪಿಜೆಪಿಯ ಆರ್. ಶಂಕರ್ ಬಿಜೆಪಿ ತೆಕ್ಕೆಗೆ</strong><br /> ರಾಣೆಬೆನ್ನೂರು ಕ್ಷೇತ್ರದಿಂದ ಕರ್ನಾಟಕ ಪ್ರಜಾ ಜನತಾ ಪಕ್ಷ(ಕೆಪಿಜೆಪಿ)ದಿಂದ ಆಯ್ಕೆ ಆಗಿರುವ ಆರ್. ಶಂಕರ್ ಬಿಜೆಪಿ ಪಾಳಯ ಸೇರಿದ್ದಾರೆ.</p>.<p>ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಪಾಲ್ಗೊಂಡಿದ್ದ ಶಂಕರ್, ಶಾಸಕಾಂಗ ಪಕ್ಷದ ನಾಯಕರಾಗಿ ಯಡಿಯೂರಪ್ಪ ಅವರನ್ನು ಆಯ್ಕೆ ಮಾಡುವಾಗ ಅವರು ಸೂಚಕರಾಗಿ ಸಹಿಮಾಡಿದ್ದಾರೆ.</p>.<p>ರಾಜ ಭವನಕ್ಕೆ ಬಿಜೆಪಿ ನಿಯೋಗ ಭೇಟಿ ಮಾಡಿದಾಗ ಶಂಕರ್ ಕೂಡ ಇದ್ದರು. ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ಅವರ ಆಪ್ತರೂ ಆಗಿರುವ ಶಂಕರ್, ಹಳೆಯ ಸಖ್ಯದ ಕಾರಣಕ್ಕೆ ಅವರ ಜತೆ ಗುರುತಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>