ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದವರು ಬಹುಮತ ಸಾಬೀತುಪಡಿಸಲು ಅಧಿವೇಶನ ನಡೆಸುವ ಮುನ್ನ, ಆಯ್ಕೆಯಾಗಿರುವ ಶಾಸಕರಲ್ಲಿ ಹಿರಿತನ ಯಾರಿಗೆ ಎಂಬ ಮಾಹಿತಿಯನ್ನು ಪಡೆಯುತ್ತಾರೆ. ವಿಧಾನಸಭೆ ಕಾರ್ಯದರ್ಶಿ ನೀಡುವ ಮಾಹಿತಿ ಆಧರಿಸಿ, ತಮಗೆ ಸೂಕ್ತವೆನಿಸಿದ ಶಾಸಕರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಕ ಮಾಡುವಂತೆ ರಾಜ್ಯಪಾಲರಿಗೆ ಶಿಫಾರಸು ಮಾಡುತ್ತಾರೆ. ರಾಜ್ಯಪಾಲರು ಪ್ರಮಾಣ ವಚನ ಬೋಧಿಸಿ, ಜವಾಬ್ದಾರಿ ನಿಭಾಯಿಸುವಂತೆ ಆದೇಶ ಹೊರಡಿಸುತ್ತಾರೆ.