ಭದ್ರಾ ಜಲಾನಯನ ಪ್ರದೇಶದಲ್ಲಿ ಮುಂಗಾರುಪೂರ್ವ ಮಳೆಯಿಂದಾಗಿ ತುಂಗಭದ್ರಾ ನದಿಯ ಒಳ ಹರಿವು ಹೆಚ್ಚಳವಾಗುತ್ತಿದೆ. ಸಿಂಗಟಾಲೂರು ಏತನೀರಾವರಿ ಬ್ಯಾರೇಜ್ನಲ್ಲಿ ನೀರಿನ ಸಂಗ್ರಹ ಹೆಚ್ಚಳವಾದ ಹಿನ್ನೆಲೆಯಲ್ಲಿ ಜಾಕ್ವೆಲ್ನಿಂದ ನೀರು ಎತ್ತಿ ಪೈಪ್ಲೈನ್ ಮೂಲಕ ತಾಲ್ಲೂಕಿನ ಹಿರೇಹಡಗಲಿ, ಅರಳಿಹಳ್ಳಿ, ಮಾನ್ಯರಮಸಲವಾಡ ಕೆರೆಗಳಿಗೆ ನೀರು ತುಂಬಿಸಲಾಗುತ್ತಿದೆ.