ಈ ಕುರಿತು ನಗರ ಜಿಲ್ಲಾಧಿಕಾರಿ ದಯಾನಂದ್ ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಮಳೆಗಾಲ ಆರಂಭವಾಗುವ ಸಮಯದಲ್ಲಿ ಚಿಕನ್ ಗುನ್ಯಾ, ಡೆಂಗಿ, ಮಲೇರಿಯಾದಂತಹ ರೋಗಗಳು ಹೆಚ್ಚುತ್ತವೆ. ಈಗ ನಿಫಾ ಕೂಡ ಜನರಲ್ಲಿ ಆತಂಕ ಹೆಚ್ಚಿಸಿದೆ. ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವುದು ಇದಕ್ಕೆ ಮೊದಲ ಪರಿಹಾರ. ಆದ್ದರಿಂದ ನಗರದಲ್ಲಿ ಜಾಗೃತಿ ಹೆಚ್ಚಿಸುವ ಕೆಲಸ ಮಾಡಲಿದ್ದೇವೆ’ ಎಂದು ಹೇಳಿದರು.