ಕುಣಿಗಲ್ ತೆಂಗು ಉತ್ಪಾದಕರ ಕಂಪನಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹುಲಿವಾನ ಗಂಗಾಧರಯ್ಯ ಮಾತನಾಡಿ, ನಾಡಿನಲ್ಲಿ ಬೆಳೆದ ತೆಂಗನ್ನು ಪೂಜೆ ಮತ್ತು ಅಡಿಗೆಗಾಗಿ ಮಾತ್ರ ಬಳಸಿಕೊಳ್ಳಲಾಗುತ್ತಿದೆ. ಅಲ್ಲದೇ ವಿವಿಧ ಉತ್ಪನ್ನಗಳನ್ನು ತಯಾರಿಸುವಲ್ಲಿ ಮತ್ತು ತೆಂಗು ಮಾರುಕಟ್ಟೆಯನ್ನು ಅಭಿವೃದ್ಧಿ ಪಡಿಸದ ಕಾರಣ ತೆಂಗು ಬೆಳೆಗಾರರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ತಾಲ್ಲೂಕಿನಲ್ಲಿ ತೆಂಗು ಬೆಳೆಗಾರರ ಆರ್ಥಿಕ ಮತ್ತು ಸಾಮಾಜಿಕ ಪ್ರಗತಿಗಾಗಿ ಕಂಪನಿ ಪ್ರಾರಂಭಿಸಲಾಗಿದೆ ಎಂದರು.