ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನಸೌಧಕ್ಕೆ ಬಾರದ ದೇವೇಗೌಡ

Last Updated 25 ಮೇ 2018, 20:15 IST
ಅಕ್ಷರ ಗಾತ್ರ

ಬೆಂಗಳೂರು: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿರುವ ಪುತ್ರ ಎಚ್‌.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವ ಕ್ಷಣವನ್ನು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಟಿ.ವಿ.ಯಲ್ಲೇ ವೀಕ್ಷಿಸಿದರು.

ಬಿಜೆಪಿಗೆ ಬಹುಮತ ಇಲ್ಲದಿದ್ದರೂ ರಾಜ್ಯಪಾಲ ವಜುಭಾಯಿ ವಾಲಾ ಅವರು ಸರ್ಕಾರ ರಚಿಸಲು ಬಿ.ಎಸ್‌.ಯಡಿಯೂರಪ್ಪ ಅವರಿಗೆ ಅವಕಾಶ ನೀಡಿದ್ದನ್ನು ಖಂಡಿಸಲು, ಕಳೆದ ಶನಿವಾರ ಕಾಂಗ್ರೆಸ್‌–ಜೆಡಿಎಸ್‌ ಜಂಟಿಯಾಗಿ ನಡೆಸಿದ್ದ ಪ್ರತಿಭಟನೆಯಲ್ಲಿ ದೇವೇಗೌಡರು ಉತ್ಸಾಹದಿಂದ ಭಾಗವಹಿಸಿದ್ದರು. ಅವರು ಶುಕ್ರವಾರ ವಿಧಾನಸೌಧಕ್ಕೆ ಭೇಟಿ ನೀಡಬಹುದು ಎಂಬ ನಿರೀಕ್ಷೆಯನ್ನು ಪಕ್ಷದ ಕೆಲವು ಮುಖಂಡರು ಹೊಂದಿದ್ದರು.

ಕಾಂಗ್ರೆಸ್‌ ಪಕ್ಷದ ಪ್ರಮುಖರೆಲ್ಲ ವಿಧಾನಸೌಧಕ್ಕೆ ಬಂದಿದ್ದರೂ ದೇವೇಗೌಡರು ಮಾತ್ರ ಅತ್ತ ತಲೆ ಹಾಕಲಿಲ್ಲ. ಅದರ ಬದಲು, ಪದ್ಮನಾಭ ನಗರದ ಮನೆಯಲ್ಲೇ ಕುಳಿತು ದಿನದ ಬೆಳವಣಿಗೆಗಳ ವಿವರ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT