ಬಿಜೆಪಿಗೆ ಬಹುಮತ ಇಲ್ಲದಿದ್ದರೂ ರಾಜ್ಯಪಾಲ ವಜುಭಾಯಿ ವಾಲಾ ಅವರು ಸರ್ಕಾರ ರಚಿಸಲು ಬಿ.ಎಸ್.ಯಡಿಯೂರಪ್ಪ ಅವರಿಗೆ ಅವಕಾಶ ನೀಡಿದ್ದನ್ನು ಖಂಡಿಸಲು, ಕಳೆದ ಶನಿವಾರ ಕಾಂಗ್ರೆಸ್–ಜೆಡಿಎಸ್ ಜಂಟಿಯಾಗಿ ನಡೆಸಿದ್ದ ಪ್ರತಿಭಟನೆಯಲ್ಲಿ ದೇವೇಗೌಡರು ಉತ್ಸಾಹದಿಂದ ಭಾಗವಹಿಸಿದ್ದರು. ಅವರು ಶುಕ್ರವಾರ ವಿಧಾನಸೌಧಕ್ಕೆ ಭೇಟಿ ನೀಡಬಹುದು ಎಂಬ ನಿರೀಕ್ಷೆಯನ್ನು ಪಕ್ಷದ ಕೆಲವು ಮುಖಂಡರು ಹೊಂದಿದ್ದರು.