ಈ ಹಿನ್ನೆಲೆಯಲ್ಲಿ ಸುಜಾತಾ ಮತ್ತು ಸದಸ್ಯ ನಟರಾಜ್ ನಡುವೆ ಮಾತಿನ ಚಕಮುಕಿ ನಡೆದಿದೆ. ರಾಜೀನಾಮೆ ನೀಡಬೇಕು ಎಂದು ನಟರಾಜ್ ಒತ್ತಾಯಿಸಿದಾಗ ಅಧ್ಯಕ್ಷೆ ಪರವಾಗಿ ಅವರ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿ ದರು. ಗಲಾಟೆ ಹೆಚ್ಚಾದಾಗ ನಗರಸಭೆ ಅಧಿಕಾರಿಗಳು ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದೆ ಎಂದು ತಿಳಿಸಿ ಎಲ್ಲರನ್ನು ಹೊರಗಡೆ ಕಳುಹಿಸಿ, ಅಧ್ಯಕ್ಷರ ಕೊಠಡಿಗೆ ಬೀಗ ಹಾಕಿದರು.