ಬಂಕಾಪುರ ಸುಂಕದಕೆರಿ ಅಯ್ಯನ ಹೊಂಡದಲ್ಲಿನ ಕೊಳವೆ ಬಾವಿಗೆ ಅಳವಡಿಸಿದ ವಿದ್ಯುತ್ ಬೋರ್ಡ್ನಲ್ಲಿ ಪದೇ,ಪದೇ ವಿದ್ಯುತ್ ಪ್ರವಹಿಸುತ್ತಲೇ ಇರುತ್ತದೆ. ಅದನ್ನು ಅದನ್ನು ಸರಿಪಡಿಸುವಂತೆ ಹಲವು ಬಾರಿ ಪುರಸಭೆಗೆ ಮನವಿ ಮಾಡಿದ್ದರೂ, ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದರು. ಹೀಗಾಗಿ ಯುವಕ ಬಲಿಯಾದ ಎಂದು ಯುವಕನ ಸಂಬಂಧಿಕರು ಹಾಗೂ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.