ಸಿದ್ದಿಪೇಟೆ ಜಿಲ್ಲೆಯ ರಿಮ್ಮನಗುಡ್ಡದ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ತೆಲಂಗಾಣ ಸಾರಿಗೆ ಸಂಸ್ಥೆಯ ಬಸ್ಸು ಪಲ್ಟಿ ಹೊಡೆದ ಪರಿಣಾಮ ಈ ಸರಣಿ ಅವಘಡ ಸಂಭವಿಸಿದೆ. ಪಲ್ಟಿ ಹೊಡೆದ ಬಸ್ಸಿಗೆ ಕಾರು, ಲಾರಿ ಮತ್ತು ಟೆಂಪೋ ಡಿಕ್ಕಿ ಹೊಡೆದಿವೆ. ಘಟನೆಯಲ್ಲಿ 8 ಜನ ಸಾವನ್ನಪ್ಪಿದ್ದು 8 ಮಂದಿಯ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳಿಗೆ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.