‘ನಾನು ಅಧಿಕಾರದಲ್ಲಿದ್ದಾಗ ಅಂದಿನ ಪ್ರಧಾನಿಗಳಾದ ಅಟಲ್ ಬಿಹಾರಿ ವಾಜಿಪೇಯಿ ಮತ್ತು ಮನಮೋಹನ ಸಿಂಗ್ ಜೊತೆ ಮಾತುಕತೆ ನಡೆಸಿದ್ದೆ. ಸಿಯಾಚಿನ್ ಮತ್ತು ಕಾಶ್ಮೀರ ವಿವಾದ ಸೇರಿ ನಾಲ್ಕು ಅಂಶದ ಕಾರ್ಯತಂತ್ರಗಳನ್ನು ಹೆಣೆದು ವಿವಾದ ಬಗೆಹರಿಸಿಕೊಳ್ಳಲು ಪ್ರಯತ್ನಿಸಿದ್ದೆವು. ಆದರೆ, ಮುಂದಿನ ದಿನಗಳಲ್ಲಿ ಅದು ನಡೆಯುವ ಸಾಧ್ಯತೆ ಇಲ್ಲ’ ಎಂದು ಅವರು ‘ವಾಯ್ಸ್ ಆಫ್ ಅಮೆರಿಕ’ ಸುದ್ದಿ ವಾಹಿನಿಗೆ ನೀಡಿರುವ ಸಂದರ್ಶನದಲ್ಲಿ ಅಭಿಪ್ರಾಯಪಟ್ಟರು. ಭಾರತ ಮಾತ್ರವಲ್ಲ ಪಾಕಿಸ್ತಾನ ಕೂಡ ಪರಮಾಣು ಶಸ್ತ್ರಾಸ್ತ್ರ ರಾಷ್ಟ್ರವಾಗಿದೆ. ನಮ್ಮ ಸ್ವತ್ತಿನ ಮೇಲೆ ನಿಯಂತ್ರಣ ಸಾಧಿಸಲು ಯಾರೂ ಬಿಡುವುದಿಲ್ಲ ಎಂದು ಹೇಳಿದ್ದಾರೆ.