‘ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಸೋತು ಸುಣ್ಣವಾದರೂ, ಪಕ್ಷದೊಳಗಿನ ಆಂತರಿಕ ಜಗಳ ನಿಂತಿಲ್ಲ. ಪುತ್ತೂರಿನ ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿ ಅವರು ಇನ್ನು ಪಕ್ಷ ಕಟ್ಟುವ ಬದಲು ಮನೆಯಲ್ಲಿ ಬೀಡಿ ಕಟ್ಟುವುದು ಒಳಿತು ಎಂದು ಪುತ್ತೂರು ನಗರಸಭಾ ಕಾಂಗ್ರೆಸ್ ಸದಸ್ಯ ಎಚ್. ಮಹಮ್ಮದ್ ಆಲಿ ಅವರು ರವಾನಿಸಿರುವ ವಾಟ್ಸ್ಆ್ಯಪ್ ಸಂದೇಶವನ್ನು ಖಂಡಿಸಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಸಂಯೋಜಕ ಇಸಾಖ್ ಸಾಲ್ಮರ ಅವರು ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮುಂದಿನ ನಗರಸಭಾ ಚುನಾವಣೆಯ ಬಳಿಕ ಬೀಡಿ ಕಟ್ಟುವವರು ಯಾರು ಎಂಬುವುದು ಮಹಮ್ಮದ್ ಆಲಿ ಅವರಿಗೆ ಗೊತ್ತಾಗಲಿದೆ’ ಎಂದಿದ್ದರು.