‘ಕಂಪ್ಲಿ ವಿಧಾನಸಭಾ ಕ್ಷೇತ್ರವಾಗಿ 10 ವರ್ಷ ಕಳೆದಿವೆ. ಜತೆಗೆ ತಾಲ್ಲೂಕು ಕೇಂದ್ರವಾಗಿ ಜನ್ಮತಳೆದಿದೆ. ಆದರೆ, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ನಿರ್ಲಕ್ಷ್ಯದಿಂದ ಬಸ್ ನಿಲ್ದಾಣ ಅಭಿವೃದ್ಧಿ ಕಾಣದೆ ಕುಂಠಿತಗೊಂಡಿದೆ. ನೂತನ ಶಾಸಕರಾದರೂ ಇತ್ತ ಗಮನಹರಿಸಿ ಬಸ್ ನಿಲ್ದಾಣ ಮೇಲ್ದರ್ಜೆಗೇರಿಸಬೇಕು. ಮೂಲಸೌಕರ್ಯ ಕಲ್ಪಿಸಬೇಕು’ ಎಂದು ಜೆಡಿಎಸ್ ಜಿಲ್ಲಾ ಘಟಕದ ಉಪಾಧ್ಯಕ್ಷ ಕೆ.ಎಂ.ಹೇಮಯ್ಯಸ್ವಾಮಿ ಆಗ್ರಹಿಸಿದರು.