ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸೋಲು: ಚಂದ್ರಬಾಬು ನಾಯ್ಡು

Last Updated 27 ಮೇ 2018, 14:17 IST
ಅಕ್ಷರ ಗಾತ್ರ

ನವದೆಹಲಿ: 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಸೋಲಿನ ರುಚಿ ನೋಡಲಿದೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಭವಿಷ್ಯ ನುಡಿದಿದ್ದಾರೆ.

2019ರಲ್ಲಿ ಪ್ರಾದೇಶಿಕ ಪಕ್ಷಗಳು ರಾಜಕಾರಣ ಮಾಡಲಿವೆ. ಎಲ್ಲಾ ಪ್ರಾದೇಶಿಕ ಪಕ್ಷಗಳು ಜೊತೆಗೂಡಿ ಬಿಜೆಪಿ ಸೋಲನ್ನು ಉಣಬಡಿಸಲಿವೆ. ಬಿಜೆಪಿ ಸುಳ್ಳು ಭರವಸೆಗಳನ್ನು ನೀಡುತ್ತಾ ಬಂದಿದೆಯೇ ಹೊರತು ಯಾವುದನ್ನೂ ಕಾರ್ಯರೂಪಕ್ಕೆ ತಂದಿಲ್ಲ ಎಂದು ಆರೋಪಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯನ್ನು ಟೀಕಿಸಿದ ನಾಯ್ಡು, ಮೋದಿ ಪ್ರಚಾರದಲ್ಲಿ ಬಡಾಯಿ ಮಾತುಗಳೇ ಇರುತ್ತದೆ. ಕಾರ್ಯರೂಪಕ್ಕೆ ಬರುವುದಿಲ್ಲ. ದೊಡ್ಡ ದೊಡ್ಡ ಮಾತುಗಳನ್ನಾಡುತ್ತಾರೆ. ಯಾವ ಕೆಲಸವನ್ನೂ ಮಾಡುವುದಿಲ್ಲ ಎಂದಿದ್ದಾರೆ.

ವಿಶೇಷ ಸ್ಥಾನಮಾನ ನಮ್ಮ ಹಕ್ಕು. ಆದರೆ ಕೇಂದ್ರ ಯಾಕೆ ಇದರಲ್ಲಿ ಭೇದಭಾವ ತೋರಿತು? ಯಾಕೆ ಆಂಧ್ರಪ್ರದೇಶಕ್ಕೆ  ವಿಶೇಷ ಸ್ಥಾನಮಾನ ನೀಡುತ್ತಿಲ್ಲ? ಎಂದು ಪ್ರಶ್ನಿಸಿದ ನಾಯ್ಡು, ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಆಂಧ್ರಪ್ರದೇಶಕ್ಕೆ ಅನ್ಯಾಯ ಮಾಡಿದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT